ಇತ್ತೀಚಿನ ಸುದ್ದಿ
Trending

ಶಾಸಕ ರಾಜು ಕಾಗೆ ಸಹೋದರನ ಪುತ್ರನಿಂದ್ದ ಕಾರು ಅಪಘಾತ: ಓರ್ವ ಸಾವು

ಬೆಳಗಾವಿ, ಏಪ್ರಿಲ್​ 02: ಶಾಸಕ ರಾಜು ಕಾಗೆಯ (Raju Kage) ಸಹೋದರನ ಪುತ್ರ ಚಲಾಯಿಸುತ್ತಿದ್ದ ಕಾರು ಬೈಕ್​ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಗೋಕಾಕ್​ ಮೂಲದ ಬಸವರಾಜ ಪುಡಕಲಕಟ್ಟಿ(22) ಮೃತ ದುರ್ದೈವಿ. ಬೈಕ್​ನಲ್ಲಿದ್ದ ಸಣ್ಣ ವಿಠ್ಠಲ್ ದುರದುಂಡಿ, ನಿಂಗಪ್ಪ ಹೆಬ್ಬಾಳ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜು ಕಾಗೆ ಸಹೋದರನ ಪುತ್ರ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Leave a Reply

Your email address will not be published. Required fields are marked *

Back to top button